ರಾಷ್ಟ್ರೀಯ ಕ್ರೀಡಾ ಆಡಳಿತ ನಿಯಮಗಳು, 2026 | ಮರ್ಕೋಸೂರ್ ಒಪ್ಪಂದಕ್ಕೆ ಐರೋಪ್ಯಾ ಒಕ್ಕೂಟ (EU) ರಾಷ್ಟ್ರಗಳ ಅನುಮೋದನೆ | DRDO ದಿಂದ 3ನೇ ತಲೆಮಾರಿನ MPATGM ನ ಯಶಸ್ವಿ ಹಾರಾಟ ಪರೀಕ್ಷೆ | 38ನೇ ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಂವಾದ | ಪುಷ್ಪಗಳ ಕಣಿವೆ (Valley of Flowers) | NPS ವಾತ್ಸಲ್ಯ ಯೋಜನೆ, 2025 | ನಿಶ್ಯಸ್ತ್ರೀಕರಣ ವಿಷಯಗಳ ಕುರಿತಾದ ಸಲಹಾ ಮಂಡಳಿ | NIRANTAR (ನಿರಂತರ್) ವೇದಿಕೆ | ತ್ವರಿತ ವಾಣಿಜ್ಯ (ಕ್ವಿಕ್ ಕಾಮರ್ಸ್) ವೇದಿಕೆಗಳು 10 ನಿಮಿಷಗಳ ವಿತರಣೆ ಸೇವೆಯನ್ನು ನಿಲ್ಲಿಸಲಿವೆ | ಉಬ್ಬು (ಪಫರ್) ಮೀನು ವಿಷಬಾಧೆ | ರಾಷ್ಟ್ರೀಯ ಉದ್ಯಮಶೀಲತಾ ಅಭಿಯಾನ

ರಾಷ್ಟ್ರೀಯ ಕ್ರೀಡಾ ಆಡಳಿತ ನಿಯಮಗಳು, 2026

ಸಾಮಾನ್ಯ ಅಧ್ಯಯನ- 2/ ಆಡಳಿತ

ಇದೀಗ ಸುದ್ದಿಯಲ್ಲಿದೆ: 

  • ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಕ್ರೀಡಾ ಆಡಳಿತ ಕಾಯ್ದೆ, 2025’ರ ಅಡಿಯಲ್ಲಿ, ‘ರಾಷ್ಟ್ರೀಯ ಕ್ರೀಡಾ ಆಡಳಿತ (ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು) ನಿಯಮಗಳು, 2026’ ಅನ್ನು ಅಧಿಸೂಚಿಸಿದೆ.

ನಿಯಮಗಳ ಉದ್ದೇಶಗಳು:

  • ವೃತ್ತಿಪರತೆ ಮತ್ತು ಪ್ರಮಾಣೀಕರಣ:- ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ವೃತ್ತಿಪರಗೊಳಿಸುವುದು ಮತ್ತು ಅವುಗಳಿಗೆ ಒಂದು ನಿಗದಿತ ಮಾನದಂಡವನ್ನು ರೂಪಿಸುವುದು.
  • ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ: ಕ್ರೀಡಾ ಆಡಳಿತ ವ್ಯವಸ್ಥೆಯಲ್ಲಿ ಕ್ರೀಡಾಪಟುಗಳ ಅರ್ಥಪೂರ್ಣ ಭಾಗವಹಿಸುವಿಕೆಯನ್ನು ಖಚಿತಪಡಿಸುವುದ.

ನಿಯಮಗಳ ಪ್ರಮುಖ ಅಂಶಗಳು:

  • ಅತ್ಯುತ್ತಮ ಅರ್ಹತೆಯ ಕ್ರೀಡಾಪಟುಗಳ ಕಡ್ಡಾಯ ಸೇರ್ಪಡೆ:- ಪ್ರತಿ ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ‘ಸಾಮಾನ್ಯ ಸಭೆ’ಯಲ್ಲಿ ಕನಿಷ್ಠ 4 ಜನ ‘ಅತ್ಯುತ್ತಮ ಅರ್ಹತೆಯ ಕ್ರೀಡಾಪಟುಗಳನ್ನು’ (SOMs) ಕಡ್ಡಾಯವಾಗಿ ಸೇರಿಸಬೇಕು.
  • 50% ರಷ್ಟು ಮಹಿಳಾ ಕ್ರೀಡಾಪಟುಗಳಿರಬೇಕು:- ನೇಮಕಗೊಂಡ ಒಟ್ಟು ಅತ್ಯುತ್ತಮ ಅರ್ಹತೆಯ ಕ್ರೀಡಾಪಟುಗಳಲ್ಲಿ ಕಡ್ಡಾಯವಾಗಿ 50% ರಷ್ಟು ಮಹಿಳಾ ಕ್ರೀಡಾಪಟುಗಳಿರಬೇಕು.
  • SOM ಅರ್ಹತೆಯ 10 ಹಂತಗಳು:- ಈ ಶ್ರೇಣೀಕೃತ ಮಾನದಂಡದಲ್ಲಿ ನಿಗದಿಪಡಿಸಲಾಗಿದೆ. ಅವು ಈ ಕೆಳಗಿನoತಿವೆ,
    • ಇದು ಬೇಸಿಗೆ ಒಲಿಂಪಿಕ್ ಕ್ರೀಡಾಕೂಟ , ಪ್ಯಾರಾಲಿಂಪಿಕ್ ಕ್ರೀಡಾಕೂಟ ಅಥವಾ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟದಲ್ಲಿ  ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಿಂದ ಹಿಡಿದು, 
    • ರಾಷ್ಟ್ರೀಯ ಕ್ರೀಡಾಕೂಟ ಅಥವಾ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳವರೆಗೆ ವ್ಯಾಪಿಸಿದೆ.
  • ಅನರ್ಹತಾ ಮಾನದಂಡಗಳು:- ಜೈಲು ಶಿಕ್ಷೆಯನ್ನು ಎದುರಿಸುತ್ತಿರುವ ದೋಷಿಗಳಿಗೆ ಸಾಮಾನ್ಯ ಸಭೆಯ ಸದಸ್ಯತ್ವ, ಕಾರ್ಯಕಾರಿ ಸಮಿತಿ ಚುನಾವಣೆಗಳು ಅಥವಾ ಅಥ್ಲೀಟ್ ಸಮಿತಿಗಳಲ್ಲಿ ಭಾಗವಹಿಸಲು ನಿರ್ಬಂಧ ವಿಧಿಸಲಾಗಿದೆ.
  • ರಾಷ್ಟ್ರೀಯ ಕ್ರೀಡಾ ಮಂಡಳಿಯು:- ಮಾನ್ಯತೆ, ಅಂಗಸಂಸ್ಥೆಗಳ ನೋಂದಣಿ ಮತ್ತು ಆಡಳಿತ ಅಥವಾ ನಿಧಿ ದುರುಪಯೋಗಕ್ಕೆ ಸಂಬಂಧಿಸಿದ ತನಿಖೆಗಳ ಮೇಲ್ವಿಚಾರಣೆಯನ್ನು ನಡೆಸುತ್ತದೆ.
  • ರಾಷ್ಟ್ರೀಯ ಕ್ರೀಡಾ ಚುನಾವಣಾ ಸಮಿತಿ:- ಇದು ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸುವ ಜವಾಬ್ದಾರಿ ಹೊತ್ತಿದ್ದು, ಎಲ್ಲಾ ಸಮಯದಲ್ಲೂ ಕನಿಷ್ಠ 20 ಸದಸ್ಯರ ಬಲವನ್ನು ಹೊಂದಿರಬೇಕು.

ಮರ್ಕೋಸೂರ್ ಒಪ್ಪಂದಕ್ಕೆ ಐರೋಪ್ಯಾ ಒಕ್ಕೂಟ (EU) ರಾಷ್ಟ್ರಗಳ ಅನುಮೋದನೆ

ಸಾಮಾನ್ಯ ಅಧ್ಯಯನ- 2/ ಅಂತರರಾಷ್ಟ್ರೀಯ ಸಂಬಂಧಗಳು

ಇದೀಗ ಸುದ್ದಿಯಲ್ಲಿದೆ:

  • ಫ್ರಾನ್ಸ್ ನೇತೃತ್ವದ ತೀವ್ರ ವಿರೋಧ ಮತ್ತು ಯುರೋಪಿನಾದ್ಯಂತ ರೈತರ ಕಳವಳಗಳ ಹೊರತಾಗಿಯೂ, ಐರೋಪ್ಯಾ ಒಕ್ಕೂಟ (EU) ದಕ್ಷಿಣ ಅಮೆರಿಕದ ಮರ್ಕೋಸೂರ್ ಬಣದೊಂದಿಗೆ ದೀರ್ಘಕಾಲದ ವಿಳಂಬವಾಗಿದ್ದ ವ್ಯಾಪಾರ ಒಪ್ಪಂದವನ್ನು ಅನುಮೋದಿಸಿದೆ.

‘ಮರ್ಕೋಸೂರ್’ ಬಗ್ಗೆ:

  • ಮರ್ಕೋಸೂರ್ 1991 ರಲ್ಲಿ ರಚನೆಯಾದ ದಕ್ಷಿಣ ಅಮೆರಿಕದ ಒಂದು ವ್ಯಾಪಾರ ಬಣವಾಗಿದೆ .
  • 5 ಸದಸ್ಯ ರಾಷ್ಟ್ರಗಳು:- ಅರ್ಜೆಂಟೀನಾ, ಬ್ರೆಜಿಲ್, ಪರಾಗ್ವೆ, ಉರುಗ್ವೆ ಮತ್ತು ಬೊಲಿವಿಯಾ (ಇದರ ಹೊಸ ಪೂರ್ಣಾವಧಿಯ ಸದಸ್ಯ ರಾಷ್ಟ್ರವಾಗಿದೆ).
  • ಉದ್ದೇಶ:- ಮುಕ್ತ ವ್ಯಾಪಾರ ಮತ್ತು ಆರ್ಥಿಕ ಏಕೀಕರಣವನ್ನು ಸಾಧಿಸುವುದು ಇದರ ಉದ್ದೇಶವಾಗಿದೆ.
  • ಗಮನಿಸಿ:- ಈ ಮೊದಲು ಸದಸ್ಯ ರಾಷ್ಟ್ರವಾಗಿದ್ದ ವೆನೆಜುವೆಲಾವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ.

ಐರೋಪ್ಯಾ ಒಕ್ಕೂಟ -ಮರ್ಕೋಸೂರ್ ಮುಕ್ತ ವ್ಯಾಪಾರ ಒಪ್ಪಂದ:

  • ಸುಂಕ ಕಡಿತ:- ಸುಂಕ ಕಡಿತದ ವಿಷಯದಲ್ಲಿ ಇದು ಐರೋಪ್ಯಾ ಒಕ್ಕೂಟ (EU)ದ ಸಾರ್ವಕಾಲಿಕ ಅತಿದೊಡ್ಡ ಒಪ್ಪಂದವಾಗಿದ್ದು, EU ರಫ್ತುಗಳ ಮೇಲಿನ €4 ಬಿಲಿಯನ್‌ಗೂ ಹೆಚ್ಚು ಸುಂಕಗಳನ್ನು ರದ್ದುಗೊಳಿಸುತ್ತದೆ.
  • €111 ಬಿಲಿಯನ್ ವ್ಯಾಪಾರ ಮೌಲ್ಯ:- ಈ ಎರಡು ಬಣಗಳ ನಡುವಿನ ವ್ಯಾಪಾರ ಮೌಲ್ಯವು €111 ಬಿಲಿಯನ್ ಆಗಿದೆ. EU ಪ್ರಮುಖವಾಗಿ ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಸಾರಿಗೆ ಉಪಕರಣಗಳನ್ನು ರಫ್ತು ಮಾಡುತ್ತಿದ್ದರೆ, ಕೃಷಿ ಉತ್ಪನ್ನಗಳು ಮತ್ತು ಖನಿಜಗಳನ್ನು ಆಮದು ಮಾಡಿಕೊಳ್ಳುತ್ತದೆ.
  • ಒಪ್ಪಂದದ ವಿವರಗಳು:- ಈ ಒಪ್ಪಂದದ ಅಡಿಯಲ್ಲಿ, 
  1. ಮರ್ಕೋಸೂರ್ 15 ವರ್ಷಗಳಲ್ಲಿ EU ರಫ್ತುಗಳ ಮೇಲಿನ 91% ರಷ್ಟು ಸುಂಕವನ್ನು ತೆಗೆದುಹಾಕುತ್ತದೆ. 
  2. ಅದೇ ರೀತಿ, EU 10 ವರ್ಷಗಳಲ್ಲಿ ಮರ್ಕೋಸೂರ್ ರಫ್ತುಗಳ ಮೇಲಿನ 92% ರಷ್ಟು ಸುಂಕವನ್ನು ರದ್ದುಗೊಳಿಸುತ್ತದೆ.
  3. ಕೋಟಾಗಳ ಕಾಯ್ದಿರಿಸುವಿಕೆ:- ‘ಸೂಕ್ಷ್ಮ ಕೃಷಿ ಸರಕುಗಳ’ ಮೇಲೆ ಎರಡೂ ಕಡೆಯವರು ಕೋಟಾಗಳನ್ನು ಕಾಯ್ದುಕೊಂಡಿದ್ದಾರೆ. ಆದಾಗ್ಯೂ, EU ಗೋಮಾಂಸ ಆಮದು ಕೋಟಾಗಳನ್ನು ಹೆಚ್ಚಿಸಲಿದೆ ಮತ್ತು ಮರ್ಕೋಸೂರ್, ಸುಂಕ ರಹಿತ ಚೀಸ್ ಆಮದಿಗೆ ಅನುಮತಿ ನೀಡಲಿದೆ.

DRDO ದಿಂದ 3ನೇ ತಲೆಮಾರಿನ MPATGM ನ ಯಶಸ್ವಿ ಹಾರಾಟ ಪರೀಕ್ಷೆ

ಸಾಮಾನ್ಯ ಅಧ್ಯಯನ- 3/ ರಕ್ಷಣೆ

ಇದೀಗ ಸುದ್ದಿಯಲ್ಲಿದೆ:

  • ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), ಚಲಿಸುವ ಗುರಿಯ ಮೇಲೂ ‘ಟಾಪ್ ಅಟ್ಯಾಕ್’ (ಮೇಲ್ಭಾಗದಿಂದ ಆಕ್ರಮಣ ಮಾಡುವ) ಸಾಮರ್ಥ್ಯವನ್ನು ಹೊಂದಿರುವ, 3ನೇ ತಲೆಮಾರಿನ ‘ಫೈರ್ ಅಂಡ್ ಫರ್ಗೆಟ್’ ಮ್ಯಾನ್ ಪೋರ್ಟಬಲ್ ಟ್ಯಾಂಕ್ ನಿರೋಧಕ ಮಾರ್ಗದರ್ಶಿ ಕ್ಷಿಪಣಿ (MPATGM)ಯ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದೆ.

ಮ್ಯಾನ್ ಪೋರ್ಟಬಲ್ ಟ್ಯಾಂಕ್ ನಿರೋಧಕ ಮಾರ್ಗದರ್ಶಿ ಕ್ಷಿಪಣಿ (MPATGM)ಯ ಬಗ್ಗೆ:

  • ಈ ‘ಫೈರ್ ಅಂಡ್ ಫರ್ಗೆಟ್’ ಕ್ಷಿಪಣಿಯನ್ನು DRDO ಸ್ವದೇಶೀಯವಾಗಿ ಅಭಿವೃದ್ಧಿಪಡಿಸಿದೆ.
  • ‘ಫೈರ್ ಅಂಡ್ ಫರ್ಗೆಟ್’ (ಹಾರಿಸಿ ಮರೆತುಬಿಡು) ಮಾದರಿಯ ಕ್ಷಿಪಣಿ:- ಇದು ಉಡಾವಣೆಗೆ ಮುನ್ನವೇ ಗುರಿಯನ್ನು ಬಂಧಿಸುವ ಶಸ್ತ್ರಾಸ್ತ್ರ ವ್ಯವಸ್ಥೆಯಾಗಿದೆ. ಉಡಾವಣೆಯ ನಂತರ ಇದಕ್ಕೆ ಬಳಕೆದಾರನಿಂದ ಹೆಚ್ಚಿನ ಮಾರ್ಗದರ್ಶನ ಅಥವಾ ನಿಯಂತ್ರಣದ ಅಗತ್ಯವಿರುವುದಿಲ್ಲ.
  • ಇದು ಇಮೇಜಿಂಗ್ ಇನ್ಫ್ರಾರೆಡ್ ಹೋಮಿಂಗ್ ಸೀಕರ್, ಟ್ಯಾಂಡೆಮ್ ಸಿಡಿತಲೆ, ಆಲ್-ಎಲೆಕ್ಟ್ರಿಕ್ ಕಂಟ್ರೋಲ್ ಆಕ್ಚುಯೇಶನ್ ಸಿಸ್ಟಮ್, ಫೈರ್ ಕಂಟ್ರೋಲ್ ಸಿಸ್ಟಮ್, ಪ್ರೊಪಲ್ಷನ್ ಸಿಸ್ಟಮ್ ಮತ್ತು ಉನ್ನತ-ಕಾರ್ಯಕ್ಷಮತೆಯ ಸೈಟಿಂಗ್ ಸಿಸ್ಟಮ್ ಸೇರಿದಂತೆ ಅತ್ಯಾಧುನಿಕ ಸ್ವದೇಶಿ ತಂತ್ರಜ್ಞಾನಗಳನ್ನು ಹೊಂದಿದೆ.
  • ಈ ಕ್ಷಿಪಣಿಯು ಹಗಲು ಮತ್ತು ರಾತ್ರಿ ಯುದ್ಧ ಕಾರ್ಯಾಚರಣೆಗಳನ್ನು ನಡೆಸಲು ಸಮರ್ಥವಾಗಿದೆ ಮತ್ತು ಆಧುನಿಕ ಪ್ರಮುಖ ಯುದ್ಧ ಟ್ಯಾಂಕ್‌ಗಳನ್ನು ಪರಿಣಾಮಕಾರಿಯಾಗಿ ಸೋಲಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.
  • ಇದನ್ನು ಟ್ರೈಪಾಡ್ ಮತ್ತು ಸೇನಾ ವಾಹನ ಉಡಾವಣೆ ಎರಡರಿಂದಲೂ ಉಡಾವಣೆ ಮಾಡಬಹುದು.

38ನೇ ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಂವಾದ

ಸಾಮಾನ್ಯ ಅಧ್ಯಯನ- 2 / ಅಂತರರಾಷ್ಟ್ರೀಯ ಸಂಬಂಧಗಳು

ಇದೀಗ ಸುದ್ದಿಯಲ್ಲಿದೆ:

  • ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಫ್ರೆಂಚ್ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರ ಸಹ-ಅಧ್ಯಕ್ಷತೆಯಲ್ಲಿ ನಡೆದ 38ನೇ ‘ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಂವಾದ’ದ ಸಂದರ್ಭದಲ್ಲಿ, ಭಾರತ ಮತ್ತು ಫ್ರಾನ್ಸ್ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಪುನರುಚ್ಚರಿಸಿದವು.

ಭಾರತ-ಫ್ರಾನ್ಸ್ ಸಂಬಂಧಗಳು:

  • ಜನವರಿ 26, 1998 ರಂದು ಕಾರ್ಯತಂತ್ರದ ಪಾಲುದಾರಿಕೆ ಪ್ರಾರಂಭ:- ಇದು ಭಾರತದ ಮೊಟ್ಟಮೊದಲ ಕಾರ್ಯತಂತ್ರದ ಪಾಲುದಾರಿಕೆಯಾಗಿದೆ.
  • ಡಸಾಲ್ಟ್ ಏವಿಯೇಷನ್‌ನಿಂದ ರಫೇಲ್ ಯುದ್ಧ ವಿಮಾನಗಳ ಖರೀದಿ:- ಭಾರತ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸಿದೆ.
  • ಪ್ರಾಜೆಕ್ಟ್ P-75ನ ಅಡಿಯಲ್ಲಿ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳು ನಿರ್ಮಾಣ:- ಫ್ರಾನ್ಸ್‌ನ ನೇವಲ್ ಗ್ರೂಪ್‌ನ ಸಹಯೋಗದೊಂದಿಗೆ, ಭಾರತದಲ್ಲಿ 6 ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲಾಗಿದೆ; ಇದರಲ್ಲಿ ‘ಐಎನ್‌ಎಸ್ ವಾಗ್ಶೀರ್’ ಇತ್ತೀಚಿನದ್ದಾಗಿದೆ. 
  • ‘ರಫೇಲ್-ಎಂ’ ಯುದ್ಧ ವಿಮಾನಗಳ ಖರೀದಿ:- ಉಭಯ ರಾಷ್ಟ್ರಗಳು ಭಾರತೀಯ ನೌಕಾಪಡೆಗಾಗಿ 26 ‘ರಫೇಲ್-ಎಂ’ ಯುದ್ಧ ವಿಮಾನಗಳನ್ನು ಖರೀದಿಸಲು ಅಂತರ-ಸರ್ಕಾರಿ ಒಪ್ಪಂದವನ್ನು (IGA) ಅಧಿಕೃತವಾಗಿ ಅಂತಿಮಗೊಳಿಸಿವೆ.
  • ಜಂಟಿ ಸಮರಾಭ್ಯಾಸಗಳು:- ಶಕ್ತಿ, ವರುಣ, ಫ್ರಿನ್ಜೆಕ್ಸ್-23 (Shakti, Varuna, FRINJEX-23).
  • ಐರೋಪ್ಯ ಒಕ್ಕೂಟದೊಳಗೆ ಭಾರತದ 5ನೇ ಅತಿದೊಡ್ಡ ವ್ಯಾಪಾರ ಪಾಲುದಾರ:- ಮೊದಲ 4 ಸ್ಥಾನಗಳು- ನೆದರ್ಲ್ಯಾಂಡ್ಸ್, ಬೆಲ್ಜಿಯಂ, ಇಟಲಿ ಮತ್ತು ಜರ್ಮನಿ.
  • ಭಾರತದ ಏಕೀಕೃತ ಪಾವತಿ ವ್ಯವಸ್ಥೆ (UPI):- ಫ್ರಾನನಲ್ಲಿ ಸಕ್ರಿಯಗೊಳಿಸುವ ಪ್ರಕ್ರಿಯೆಯು ಯಶಸ್ವಿಯಾಗಿದೆ.
  • ಜಂಟಿ ಮಿಷನ್‌ಗಳು:- 
  • TRISHNA (ತ್ರಿಷ್ಠಾ)- ಉಪಗ್ರಹ ಮಿಷನ್,
  • ಸಮುದ್ರ ವಲಯದ ಜಾಗೃತಿ (MDA) ವ್ಯವಸ್ಥೆಗಳು, 
  • ನೆಲದ ಮೇಲೆ ನಿಲ್ದಾಣ ಬೆಂಬಲ (ಗ್ರೌಂಡ್ ಸ್ಟೇಷನ್ ಸಪೋರ್ಟ್).
  • ಅಂತರರಾಷ್ಟ್ರೀಯ ಸೌರ ಒಕ್ಕೂಟ (ISA): ವಿಶ್ವದಾದ್ಯಂತ ಸೌರಶಕ್ತಿಯನ್ನು ಉತ್ತೇಜಿಸಲು 2015 ರಲ್ಲಿ ಭಾರತ ಮತ್ತು ಫ್ರಾನ್ಸ್ ಇದನ್ನು ಜಂಟಿಯಾಗಿ ಸ್ಥಾಪಿಸಿದವು.

ಪುಷ್ಪಗಳ ಕಣಿವೆ (Valley of Flowers)

ಸಾಮಾನ್ಯ ಅಧ್ಯಯನ-1/ಭೂಗೋಳಶಾಸ್ತ್ರ

ಇದೀಗ ಸುದ್ದಿಯಲ್ಲಿದೆ: 

  • ಪುಷ್ಪಗಳ ಕಣಿವೆಯ ಸಮೀಪದಲ್ಲಿ ಕಾಡ್ಗಿಚ್ಚು ಹಬ್ಬುತ್ತಿದ್ದು, ಅರಣ್ಯ ಇಲಾಖೆಯು ವಾಯುಪಡೆಯ ಸಹಾಯವನ್ನು ಕೋರುವ ಅನಿವಾರ್ಯತೆ ಉಂಟಾಗಿದೆ.

ಪುಷ್ಪಗಳ ಕಣಿವೆಯ ಬಗ್ಗೆ:

  • ಸ್ಥಳ:- ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ‘ಪುಷ್ಪಗಳ ಕಣಿವೆ ರಾಷ್ಟ್ರೀಯ ಉದ್ಯಾನವನ’ದ ಒಳಭಾಗದಲ್ಲಿದೆ. ಇದು “ನಂದಾ ದೇವಿ ಜೀವಗೋಳ ಮೀಸಲು ಪ್ರದೇಶ”ದ ಭಾಗವಾಗಿದೆ.
  • ಪುಷ್ಪಗಳ ಕಣಿವೆ ಎಂದು ಕರೆಯಲು ಕಾರಣ:- ಮುಂಗಾರು ಮಳೆಯ ಸಮಯದಲ್ಲಿ ಇಡೀ ಕಣಿವೆಯು ಸಾವಿರಾರು ಅರಳುವ ಹೂವುಗಳಿಂದ ಜೀವಂತಿಕೆ ಪಡೆಯುವುದರಿಂದ ಈ ಹೆಸರು ಕರೆಯುತ್ತಾರೆ. 
  • 1982 ರಲ್ಲಿ ರಾಷ್ಟ್ರೀಯ ಉದ್ಯಾನವನವನ್ನಾಗಿ ಘೋಷಿಸಲಾಯಿತು. 
  • 2005 ರಲ್ಲಿ ‘ಯುನೆಸ್ಕೋ ವಿಶ್ವ ಪರಂಪರೆಯ ತಾಣ’ವನ್ನಾಗಿ ಘೋಷಿಸಲಾಯಿತು. ಏಕೆಂದರೆ ಇದರ ಸಾಟಿಯಿಲ್ಲದ ಸೌಂದರ್ಯ ಮತ್ತು ವಿಶಿಷ್ಟ ಉನ್ನತದ (ಆಲ್ಪೈನ್) ಪರಿಸರ ವ್ಯವಸ್ಥೆಯಿಂದಾಗಿ.
  • ಬ್ರಿಟಿಷ್ ಪರ್ವತಾರೋಹಿ ಫ್ರಾಂಕ್ ಸ್ಮಿತ್ ಅವರು 1931 ರಲ್ಲಿ ಆಕಸ್ಮಿಕವಾಗಿ ಈ ಸ್ಥಳವನ್ನು ತಲುಪಿದಾಗ, ಈ ಕಣಿವೆಯನ್ನು ಅಧಿಕೃತವಾಗಿ ಕಂಡುಹಿಡಿಯಲಾಯಿತು.

NPS ವಾತ್ಸಲ್ಯ ಯೋಜನೆ, 2025

ಸಾಮಾನ್ಯ ಅಧ್ಯಯನ- 2/ ಸರ್ಕಾರಿ ಯೋಜನೆಗಳು

ಇದೀಗ ಸುದ್ದಿಯಲ್ಲಿದೆ:

  • ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA)ವು, ಅಪ್ರಾಪ್ತ ವಯಸ್ಕರಿಗೆ ಜೀವನದ ಆರಂಭಿಕ ಹಂತದಲ್ಲೇ ಪಿಂಚಣಿ ಸೌಲಭ್ಯವನ್ನು ಒದಗಿಸಲು, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಚೌಕಟ್ಟನ್ನು ವಿಸ್ತರಿಸುವ ಮೂಲಕ ‘ಎನ್‌ಪಿಎಸ್ ವಾತ್ಸಲ್ಯ ಯೋಜನೆ, 2025’ ಕ್ಕಾಗಿ ಮಾರ್ಗಸೂಚಿಗಳನ್ನು ಹೊರಡಿಸಿದೆ.

NPS ವಾತ್ಸಲ್ಯ ಯೋಜನೆ, 2025 ರ ಬಗ್ಗೆ:

  • ಅಪ್ರಾಪ್ತ ವಯಸ್ಕರಿಗಾಗಿ ಪಿಂಚಣಿ ಉಳಿತಾಯ ಯೋಜನೆ:- ಇದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS)ಯ ಅಡಿಯಲ್ಲಿ ಬರುತ್ತದೆ.
  • ಪೋಷಕರಿಗೆ ಅಥವಾ ಕಾನೂನುಬದ್ಧ ಪಾಲಕರಿಗೆ ಅವಕಾಶ:- ಇದು ಮಗುವಿನ ಪರವಾಗಿ ಪೋಷಕರು ಅಥವಾ ಕಾನೂನುಬದ್ಧ ಪಾಲಕರಿಗೆ ಎನ್‌ಪಿಎಸ್ ಖಾತೆಯನ್ನು ತೆರೆಯಲು ಮತ್ತು ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಪ್ರಮುಖ ವೈಶಿಷ್ಟ್ಯಗಳು:

  • ಅರ್ಹತೆ:- 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಭಾರತೀಯ ನಾಗರಿಕರು.
  • ಖಾತೆಯ ಪ್ರಕಾರ:- ಅಪ್ರಾಪ್ತ ವಯಸ್ಕರ ಹೆಸರಿನಲ್ಲಿ ವೈಯಕ್ತಿಕ ಪಿಂಚಣಿ ಖಾತೆ ತೆರೆಯಲಾಗುವುದು.
  • ನಿರ್ವಹಣೆ:- ಮಗುವು ಪ್ರಾಪ್ತ ವಯಸ್ಕನಾಗುವವರೆಗೆ ಪೋಷಕರು ಅಥವಾ ಪಾಲಕರು ಈ ಖಾತೆಯನ್ನು ನಿರ್ವಹಿಸುತ್ತಾರೆ.
  • ಪರಿವರ್ತನೆ:- 18 ವರ್ಷ ತುಂಬಿದ ನಂತರ, ಖಾತೆಯು ಸಾಮಾನ್ಯ ಎನ್‌ಪಿಎಸ್ ಖಾತೆಯಾಗಿ ಪರಿವರ್ತನೆಗೊಳ್ಳುತ್ತದೆ.
  • ಅತ್ಯಲ್ಪ ಅಗತ್ಯ ಪ್ರಮಾಣದ ಕೊಡುಗೆ:- ಕನಿಷ್ಠ ಆರಂಭಿಕ ಮತ್ತು ವಾರ್ಷಿಕ ಪಾಲು ₹250 ಆಗಿದ್ದು, ಪಾಲುದಾರಿಕೆಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.
  • ಪಿಂಚಣಿ ನಿಧಿ ವ್ಯವಸ್ಥಾಪಕರ (PFMs) ಮೂಲಕ ಹೂಡಿಕೆ:- ಎನ್‌ಪಿಎಸ್ ಮಾರ್ಗಸೂಚಿಗಳ ಪ್ರಕಾರ ಹಣವನ್ನು ಹೂಡಿಕೆ ಮಾಡಲಾಗುತ್ತದೆ.

ನಿಶ್ಯಸ್ತ್ರೀಕರಣ ವಿಷಯಗಳ ಕುರಿತಾದ ಸಲಹಾ ಮಂಡಳಿ

ಸಾಮಾನ್ಯ ಅಧ್ಯಯನ-2 / ಅಂತರರಾಷ್ಟ್ರೀಯ ಸಂಬಂಧಗಳು

ಇದೀಗ ಸುದ್ದಿಯಲ್ಲಿದೆ:

  • ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿ  ಡಿ.ಬಿ. ವೆಂಕಟೇಶ್ ವರ್ಮಾ ಅವರನ್ನು, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರು 2026–27ರ ಅವಧಿಗೆ ‘ನಿಶ್ಯಸ್ತ್ರೀಕರಣ ವಿಷಯಗಳ ಕುರಿತಾದ ಸಲಹಾ ಮಂಡಳಿ’ಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. 
  • ಭಾರತೀಯರೊಬ್ಬರು ಈ ಹುದ್ದೆಯನ್ನು ಹೊಂದಿರುವುದು ಇದೇ ಮೊದಲ ಬಾರಿಯಾಗಿದೆ.

ನಿಶ್ಯಸ್ತ್ರೀಕರಣ ವಿಷಯಗಳ ಕುರಿತಾದ ಸಲಹಾ ಮಂಡಳಿಯ ಬಗ್ಗೆ:

  • ಸ್ಥಾಪನೆ:- 1978
  • ರಚನೆ:- ಈ ಮಂಡಳಿಯು 15 ಸದಸ್ಯರನ್ನು ಒಳಗೊಂಡಿದೆ ಮತ್ತು ವಿಶ್ವಸಂಸ್ಥೆಯ ನಿಶ್ಯಸ್ತ್ರೀಕರಣ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಇದರಲ್ಲಿ ಪದನಿಮಿತ್ತ ಸದಸ್ಯರಾಗಿ ಸೇವೆ ಸಲ್ಲಿಸುತ್ತಾರೆ.
  • ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲಹೆ:- ಇದು ಶಸ್ತ್ರಾಸ್ತ್ರ ಮಿತಿ ಮತ್ತು ನಿಶ್ಯಸ್ತ್ರೀಕರಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಲಹೆ ನೀಡುತ್ತದೆ.

NIRANTAR (ನಿರಂತರ್) ವೇದಿಕೆ

ಸಾಮಾನ್ಯ ಅಧ್ಯಯನ-3/ ಆರ್ಥಿಕತೆ

ಇದೀಗ ಸುದ್ದಿಯಲ್ಲಿದೆ:

  • ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು, NIRANTAR/ನಿರಂತರ್ (ಪರಿವರ್ತನೆ, ಹೊಂದಿಕೆ ಮತ್ತು ಸ್ಥಿತಿಸ್ಥಾಪಕತ್ವದ ನಿರ್ಮಾಣಕ್ಕಾಗಿ ನೈಸರ್ಗಿಕ ಸಂಪನ್ಮೂಲಗಳ ಸಂಶೋಧನೆ ಮತ್ತು ಅನ್ವಯಕ್ಕಾಗಿ ರಾಷ್ಟ್ರೀಯ ಸಂಸ್ಥೆ) ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

NIRANTAR (ನಿರಂತರ್) ಸಂಸ್ಥೆಯ ಬಗ್ಗೆ:

  • ಸ್ಥಾಪನೆ:- ಇದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC)ದ ಅಡಿಯಲ್ಲಿರುವ ಸಂಸ್ಥೆಗಳ ಒಂದು ವೇದಿಕೆಯಾಗಿದ್ದು, ಸಮನ್ವಯ ಮತ್ತು ಸಹಯೋಗವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
  • ಉದ್ದೇಶ:- ಇದರ ನಾಲ್ಕು ವಿಭಾಗಗಳು, ಅಭಿವೃದ್ಧಿಗಾಗಿ ಸಂಪನ್ಮೂಲಗಳ, ವಿಶೇಷವಾಗಿ ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆಯನ್ನು ಖಚಿತಪಡಿಸಿಕೊಳ್ಳಲು, ಅವುಗಳ ಸಂಶೋಧನೆ, ಮೌಲ್ಯಮಾಪನ ಮತ್ತು ಬಳಕೆಯ ಮೇಲೆ ಗಮನಹರಿಸುತ್ತವೆ.
  • ಮಹತ್ವ:- ಅಭಿವೃದ್ಧಿಗಾಗಿ ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ‘ನಿರಂತರ್’ ವೇದಿಕೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತ್ವರಿತ ವಾಣಿಜ್ಯ (ಕ್ವಿಕ್ ಕಾಮರ್ಸ್) ವೇದಿಕೆಗಳು 10 ನಿಮಿಷಗಳ ವಿತರಣೆ ಸೇವೆಯನ್ನು ನಿಲ್ಲಿಸಲಿವೆ

ಸಾಮಾನ್ಯ ಅಧ್ಯಯನ-3/ ಆರ್ಥಿಕತೆ

ಇದೀಗ ಸುದ್ದಿಯಲ್ಲಿದೆ:

  • ಸರ್ಕಾರದ ಆದೇಶದ ಬಳಿಕ, ಭಾರತದ ತ್ವರಿತ ವಾಣಿಜ್ಯ (ಕ್ವಿಕ್ ಕಾಮರ್ಸ್) ಕಂಪನಿಗಳಾದ ಸ್ವಿಗ್ಗಿ ಮತ್ತು ಜೆಪ್ಟೋ, ತಮ್ಮ ತ್ವರಿತ ವಾಣಿಜ್ಯ ಸೇವೆಯನ್ನು ಇನ್ನು ಮುಂದೆ ‘10 ನಿಮಿಷಗಳ ಸೇವೆ’ ಎಂದು ಪ್ರಚಾರ ಮಾಡುವುದನ್ನು ನಿಲ್ಲಿಸಲು ತಮ್ಮ ಬ್ರಾಂಡಿಂಗ್ ಅನ್ನು ಬದಲಿಸಿಕೊಂಡಿವೆ.
  • ಈ ಕ್ರಮವು ಗಿಗ್ ಕಾರ್ಮಿಕರ ಹೆಚ್ಚಿನ ಸುರಕ್ಷತೆ, ರಕ್ಷಣೆ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳನ್ನು ಖಚಿತಪಡಿಸುವ ಗುರಿಯನ್ನು ಹೊಂದಿದೆ.

ಗಿಗ್ ಕಾರ್ಮಿಕರ ಬಗ್ಗೆ:

  • ಸಾಮಾಜಿಕ ಭದ್ರತಾ ಸಂಹಿತೆ, 2020:- ಇದರ ಪ್ರಕಾರ, ಗಿಗ್ ಕಾರ್ಮಿಕರು ಎಂದರೆ ಸಾಂಪ್ರದಾಯಿಕ ಉದ್ಯೋಗದಾತ–ಉದ್ಯೋಗಿ ಸಂಬಂಧದ ಹೊರತಾಗಿ, ಕೆಲಸಗಳನ್ನು ನಿರ್ವಹಿಸಿ ಅಥವಾ ಕೆಲಸದ ವ್ಯವಸ್ಥೆಗಳಲ್ಲಿ ಭಾಗವಹಿಸಿ, ಅಂತಹ ಚಟುವಟಿಕೆಗಳಿಂದ ಆದಾಯವನ್ನು ಗಳಿಸುವ ವ್ಯಕ್ತಿಗಳು.
  • ನೀತಿ ಆಯೋಗದ 2020–21 ದತ್ತಾoಶದ ಪ್ರಕಾರ:- 77 ಲಕ್ಷ ಕಾರ್ಮಿಕರು ಗಿಗ್ ಆರ್ಥಿಕತೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಇದು 2029–30 ರ ವೇಳೆಗೆ 2.35 ಕೋಟಿಗೆ ವಿಸ್ತರಿಸುವ ನಿರೀಕ್ಷೆಯಿದೆ.

ಭಾರತದಲ್ಲಿ ಗಿಗ್ ಕಾರ್ಮಿಕರಿಗಾಗಿ ಇರುವ ಉಪಕ್ರಮಗಳು:

  • ಸಾಮಾಜಿಕ ಭದ್ರತಾ ಸಂಹಿತೆ 2020:- ಇದು ಗಿಗ್ ಕಾರ್ಮಿಕರಿಗೆ ಜೀವ ಮತ್ತು ಅಂಗವೈಕಲ್ಯ ರಕ್ಷಣೆ, ಅಪಘಾತ ವಿಮೆ ಮುಂತಾದ ವಿವಿಧ ಪ್ರಯೋಜನಗಳನ್ನು ಕಲ್ಪಿಸುತ್ತದೆ.
  • ಇ-ಶ್ರಮ್ ಪೋರ್ಟಲ್:- ಇದು ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶ ಸಂಗ್ರಹವನ್ನು ಸ್ಥಾಪಿಸುತ್ತದೆ ಮತ್ತು ಉದ್ಯೋಗಾವಕಾಶವನ್ನು ಹೆಚ್ಚಿಸಲು ಹಾಗೂ ಅವರಿಗೆ ಸಾಮಾಜಿಕ ಭದ್ರತಾ ಯೋಜನೆಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.
  • ಕರ್ನಾಟಕ ವೇದಿಕೆ (ಪ್ಲಾಟ್‌ಫಾರ್ಮ್) ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ, 2024: ಇದು ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲು ಮತ್ತು ಕಲ್ಯಾಣ ಶುಲ್ಕವನ್ನು ವಿಧಿಸಲು ಅವಕಾಶ ನೀಡುತ್ತದೆ.

ಉಬ್ಬು (ಪಫರ್) ಮೀನು ವಿಷಬಾಧೆ

ಸಾಮಾನ್ಯ ಅಧ್ಯಯನ-3/ ಪ್ರಭೇದಗಳು

ಇದೀಗ ಸುದ್ದಿಯಲ್ಲಿದೆ:

  • ವಿಜ್ಞಾನಿಗಳು ಭಾರತದಲ್ಲಿ ಪಫರ್‌ಫಿಶ್ ಸೇವನೆಯಿಂದ ವಿಷಪೂರಿತವಾದ ಮೊದಲ ಪ್ರಕರಣವನ್ನು ದೃಢಪಡಿಸಿದ್ದಾರೆ. ಈ ಘಟನೆಯು, ನದಿ ಮೂಲಗಳಲ್ಲಿರುವ ಆದರೆ ಈವರೆಗೂ ಹೆಚ್ಚಾಗಿ ಗುರುತಿಸಲ್ಪಡದ ಆರೋಗ್ಯದ ಅಪಾಯಗಳತ್ತ ಗಮನ ಸೆಳೆದಿದೆ.

ಉಬ್ಬು ಮೀನಿನ (Pufferfish) ಬಗ್ಗೆ:

  • ಇದು ಟೆಟ್ರಾಓಡಾಂಟಿಫಾರ್ಮೀಸ್ (Tetraodontiformes) ಎಂಬ ವರ್ಗೀಕರಣ ಕ್ರಮಕ್ಕೆ ಸೇರಿದೆ.
  • ಇದನ್ನು ಸ್ಥಳೀಯವಾಗಿ ಟೋಡ್‌ ಮೀನು, ಪಟ್ಕಾ ಮೀನು, ಬಲೂನ್‌ ಮೀನು ಮತ್ತು ಫುಗು ಎಂತಲೂ ಕರೆಯಲಾಗುತ್ತದೆ.
  • ಜಾಗತಿಕ ಪಟ್ಟಿಗಳಲ್ಲಿ ಸರಿಸುಮಾರು 190–193 ಮಾನ್ಯವಾದ ಪ್ರಭೇದಗಳಿವೆ.
  • ಸರ್ವಭಕ್ಷಕ ಜೀವಿಗಳಾಗಿವೆ:- ಇವು “ಬೆಂಥಿಕ್” (ಜಲಮೂಲಗಳ ತಳಭಾಗದಲ್ಲಿ ವಾಸಿಸುವ) ಆವಾಸಸ್ಥಾನವನ್ನು ಹೊಂದಿವೆ. 
  • ಭಾರತದಲ್ಲಿ ವರದಿಯಾದ ಸಿಹಿನೀರಿನ ಉಬ್ಬು ಮೀನು ಪ್ರಭೇದಗಳು ಸಾಮಾನ್ಯವಾಗಿ ನಿರ್ದಿಷ್ಟ ಭೌಗೋಳಿಕ ಪ್ರದೇಶಗಳಿಗೆ ಸ್ಥಳೀಯವಾಗಿವೆ ಮತ್ತು ಆರೋಗ್ಯಕರ ನದಿ ಪರಿಸರ ವ್ಯವಸ್ಥೆಗಳ ಸೂಚಕಗಳಾಗಿ ಕಾರ್ಯನಿರ್ವಹಿಸುತ್ತವೆ.

ಭಾರತದಲ್ಲಿನ ಸ್ಥಿತಿಗತಿ:

  • ಭಾರತೀಯ ಜಲಾನಯನ ಪ್ರದೇಶಗಳಲ್ಲಿ ಪ್ರಸ್ತುತವಾಗಿ 8 ಕುಲಗಳು (genera) ಮತ್ತು 32 ಪ್ರಭೇದದ ಉಬ್ಬು ಮೀನುಗಳು ಕಂಡು ಬರುತ್ತವೆ.
  • ಅವುಗಳ ಹಂಚಿಕೆಯು ನಿರ್ದಿಷ್ಟ ಪ್ರದೇಶಗಳು ಮತ್ತು ನದಿ ವ್ಯವಸ್ಥೆಗಳಿಗೆ, ಪ್ರಮುಖವಾಗಿ ಪಶ್ಚಿಮ ಘಟ್ಟಗಳು ಮತ್ತು ಗಂಗಾ, ಬ್ರಹ್ಮಪುತ್ರ ಹಾಗೂ ಮಹಾನದಿಯಂತಹ ಪ್ರಮುಖ ಜಲಾನಯನ ಪ್ರದೇಶಗಳಿಗೆ ಸೀಮಿತವಾಗಿದೆ.

IUCN ಕೆಂಪು ಪಟ್ಟಿಯಲ್ಲಿ ಸ್ಥಿತಿಗತಿ:

  • ‘ಕುಬ್ಜ ಉಬ್ಬು ಮೀನನ್ನು ‘ದುರ್ಬಲ’ (VU) ಎಂದು ವರ್ಗೀಕರಿಸಲಾಗಿದೆ.

ರಾಷ್ಟ್ರೀಯ ಉದ್ಯಮಶೀಲತಾ ಅಭಿಯಾನ

ಸಾಮಾನ್ಯ ಅಧ್ಯಯನ-2 / ಆಡಳಿತ, ಗ್ರಾಮೀಣಾಭಿವೃದ್ಧಿ

ಇದೀಗ ಸುದ್ದಿಯಲ್ಲಿದೆ:

  • ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಗುರಿ (DAY-NRLM)ಯ ಅಡಿಯಲ್ಲಿ, ಗ್ರಾಮೀಣ ಮಹಿಳೆಯರಿಗೆ ಕೃಷಿಯೇತರ ಜೀವನೋಪಾಯವನ್ನು ಬಲಪಡಿಸಲು “ರಾಷ್ಟ್ರೀಯ ಉದ್ಯಮಶೀಲತಾ ಅಭಿಯಾನ”ಕ್ಕೆ ಚಾಲನೆ ನೀಡಲಾಗಿದೆ.
  • ಈ ಅಭಿಯಾನವು ಉದ್ಯಮ ಉತ್ತೇಜನಕ್ಕಾಗಿ 50,000 ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡುವ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಗ್ರಾಮೀಣ ಉದ್ಯಮಶೀಲತೆಯನ್ನು ಉತ್ತೇಜಿಸಲು ಸರ್ಕಾರದ ಕ್ರಮಗಳು:

  • ಪ್ರಧಾನ ಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ (PMEGP):- 
  1. ಅನುಷ್ಠಾನ:- ಕೆವಿಐಸಿ (KVIC)
  2. ಉದ್ದೇಶ:- ಉತ್ಪಾದನೆ ಮತ್ತು ಸೇವಾ ವಲಯಗಳಲ್ಲಿ ಹೊಸ ಸೂಕ್ಷ್ಮ ಉದ್ಯಮಗಳನ್ನು ಸ್ಥಾಪಿಸಲು. 
  3. ಸಹಾಯಧನ:- ಯೋಜನಾ ವೆಚ್ಚದ ಮೇಲೆ 35% ರಷ್ಟು ಸಹಾಯಧನವನ್ನು (ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು) ನೀಡುತ್ತದೆ. 
  4. ಸಾಲ:- ಇದು ನಿರುದ್ಯೋಗಿ ಯುವಕರು ಮತ್ತು ಕುಶಲಕರ್ಮಿಗಳನ್ನು ಗುರಿಯಾಗಿಸಿಕೊಂಡು ₹25 ಲಕ್ಷದವರೆಗೆ ಸಾಲವನ್ನು ಒದಗಿಸುತ್ತದೆ.
  • ಆಸ್ಪೈರ್ (ASPIRE) ಯೋಜನೆ:- 
  1. ಸಚಿವಾಲಯ:- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ
  2. ಉದ್ದೇಶ:- ಕೃಷಿ-ಗ್ರಾಮೀಣ ನವೋದ್ಯಮಗಳನ್ನು ಉತ್ತೇಜಿಸಲು ಗ್ರಾಮೀಣ ಪ್ರದೇಶಗಳಲ್ಲಿ ‘ಜೀವನೋಪಾಯ ವ್ಯಾಪಾರ ಇನ್ಕ್ಯುಬೇಟರ್‌’ಗಳಿಗೆ (LBIs) ಮೂಲಸೌಕರ್ಯ, ಕೌಶಲ್ಯ ಕಾರ್ಯಕ್ರಮಗಳು ಮತ್ತು ನಾವೀನ್ಯತೆಗೆ ಬೆಂಬಲ. 
  3. ಧನಸಹಾಯ:- ₹1 ಕೋಟಿವರೆಗೆ.
  • ಲಖ್ ಪತಿ ದೀದಿ ಉಪಕ್ರಮ:- 
  1. ವ್ಯಾಖ್ಯಾನ:- ಕೃಷಿ ಅಥವಾ ಕೃಷಿಯೇತರ ಚಟುವಟಿಕೆಗಳ ಮೂಲಕ 4 ಋತುಗಳು/ ಚಕ್ರಗಳಲ್ಲಿ ವಾರ್ಷಿಕ ₹1 ಲಕ್ಷಕ್ಕೂ ಹೆಚ್ಚು (ತಿಂಗಳಿಗೆ ₹10,000+) ಕುಟುಂಬದ ಆದಾಯವನ್ನು ಗಳಿಸುವ ಸ್ವಸಹಾಯ ಸಂಘದ ಮಹಿಳೆಯರನ್ನು “ಲಖ್ ಪತಿ ದೀದಿ” ಎಂದು ಗುರುತಿಸಲಾಗುತ್ತದೆ.

DAY – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಗುರಿ (DAY-NRLM)ಯ ಬಗ್ಗೆ:

    • 2011 ರಲ್ಲಿ ಪ್ರಾರಂಭ:- ಇದನ್ನು ಸ್ವರ್ಣಜಯಂತಿ ಗ್ರಾಮ ಸ್ವರೋಜಗಾರ್ ಯೋಜನೆಯಿಂದ (SGSY) ಮರು ರೂಪಿಸಿ ಪ್ರಾರಂಭಿಸಲಾಯಿತು.
    • 2016 ರಲ್ಲಿ ಮರುನಾಮಕರಣ:- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಗುರಿ (NRLM) ಅನ್ನು ‘DAY-NRLM’ ಎಂದು ಮರುನಾಮಕರಣ ಮಾಡಲಾಯಿತು.
    • ನೋಡಲ್ ಸಚಿವಾಲಯ:- ಗ್ರಾಮೀಣಾಭಿವೃದ್ಧಿ ಸಚಿವಾಲಯವು.
    • ಅನುದಾನದ ಮಾದರಿ:- ಇದು ಕೇಂದ್ರ ಪ್ರಯೋಜಿತ ಯೋಜನೆಯಾಗಿದ್ದು (ಸಾಮಾನ್ಯವಾಗಿ 60:40 ಅನುಪಾತ; ಈಶಾನ್ಯ ಮತ್ತು ಹಿಮಾಲಯನ್ ರಾಜ್ಯಗಳಿಗೆ 90:10 ಅನುಪಾತ).
    • ಉದ್ದೇಶ:- ಬಡ ಗ್ರಾಮೀಣ ಕುಟುಂಬಗಳಿಗೆ ಸುಸ್ಥಿರ ಜೀವನೋಪಾಯ ಮತ್ತು ವರ್ಧಿತ ಆದಾಯವನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಬಡತನವನ್ನು ಕಡಿಮೆ ಮಾಡುವುದು.
  • ಪ್ರಮುಖ ಕಾರ್ಯತಂತ್ರ:-
    • ಗ್ರಾಮೀಣ ಬಡ ಮಹಿಳೆಯರನ್ನು ಸ್ವಸಹಾಯ ಗುಂಪುಗಳಾಗಿ ಸಾರ್ವತ್ರಿಕವಾಗಿ ಒಗ್ಗೂಡಿಸುವುದು.
    • ಸಾಮರ್ಥ್ಯ ವರ್ಧನೆ, ಸಾಲ ಸೌಲಭ್ಯ ಮತ್ತು ಜೀವನೋಪಾಯದ ವೈವಿಧ್ಯೀಕರಣವನ್ನು ಒದಗಿಸುವುದು.
  • ಪ್ರಮುಖ ಗಮನಾರ್ಹ ಕ್ಷೇತ್ರಗಳು:-
    • ಕೃಷಿ ಜೀವನೋಪಾಯಗಳು.
    • ಕೃಷಿಯೇತರ ಜೀವನೋಪಾಯಗಳು ಮತ್ತು ಉದ್ಯಮಗಳು.
    • ಆರ್ಥಿಕ ಸೇರ್ಪಡೆ ಮತ್ತು ಸಾಮಾಜಿಕ ಸಬಲೀಕರಣ.

Comments

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

More posts