ನಾಡೋಜ ಬರಗೂರು ಪ್ರಶಸ್ತಿ
ಇದೀಗ ಸುದ್ದಿಯಲ್ಲಿ
- 2025 ನೇ ಸಾಲಿನ ‘ನಾಡೋಜ ಬರಗೂರು ಪ್ರಶಸ್ತಿ’ಗೆ ಸಾಮಾಜಿಕ ಹೋರಾಟಗಾರ್ತಿ, ಲೇಖಕಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ (ಸಾಹಿತ್ಯ ಕ್ಷೇತ್ರ) ಮತ್ತು ಶಿವರುದ್ರಯ್ಯ (ಚಲನಚಿತ್ರ ಕ್ಷೇತ್ರ) ಅವರನ್ನು ಆಯ್ಕೆ ಮಾಡಲಾಗಿದೆ.
ಬರಗೂರು ಪ್ರಶಸ್ತಿಯ ಬಗ್ಗೆ:
- ಪ್ರಶಸ್ತಿ ನೀಡುವ ಸಂಸ್ಥೆ: ಈ ಪ್ರಶಸ್ತಿಯನ್ನು ‘ನಾಡೋಜ ಡಾ. ಬರಗೂರು ಪ್ರತಿಷ್ಠಾನ’ ನೀಡುತ್ತದೆ.
- ಉದ್ದೇಶ:- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಾಗೂ ಕೊಡುಗೆ ನೀಡಿದ ಸಾಧಕರಿಗೆ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಪ್ರತಿಷ್ಠಾನದ ಮೂಲ ಉದ್ದೇಶವಾಗಿದೆ.
- ಪ್ರಶಸ್ತಿಯ ಸ್ವರೂಪ:- ಈ ಪ್ರಶಸ್ತಿಯು ಒಂದು ಫಲಕ ಮತ್ತು ₹25,000 ನಗದು ಬಹುಮಾನವನ್ನು ಒಳಗೊಂಡಿರುತ್ತದೆ.
2025 ನೇ ಸಾಲಿನ ಪುರಸ್ಕೃತರು
- ಬಿ.ಟಿ. ಲಲಿತಾ ನಾಯಕ್: ಸಾಹಿತ್ಯ ಕ್ಷೇತ್ರ.
- ಶಿವರುದ್ರಯ್ಯ: ಚಲನಚಿತ್ರ ಕ್ಷೇತ್ರ.
ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ, 2025-2030
ಇದೀಗ ಸುದ್ದಿಯಲ್ಲಿದೆ:
- ‘ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025-2030’ ರ ಅಡಿಯಲ್ಲಿ ವಿವಿಧ ಪ್ರೋತ್ಸಾಹಕಗಳಿಗಾಗಿ ರಾಜ್ಯ ಸರ್ಕಾರವು ₹967 ಕೋಟಿ ವೆಚ್ಚ ಮಾಡಲು ನಿರ್ಧರಿಸಿದೆ.
ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ, 2025-2030 ರ ಕುರಿತು:
- ಕಾರ್ಯತಂತ್ರದ ಬದಲಾವಣೆ: ರಾಜ್ಯದ ಗಮನವನ್ನು ಸಾಂಪ್ರದಾಯಿಕ ಮಾಹಿತಿ ತಂತ್ರಜ್ಞಾನ (IT) ಸೇವೆಗಳಿಂದ, ಡೀಪ್ ಟೆಕ್ ನಾವೀನ್ಯತೆಗೆ ಪರಿವರ್ತಿಸುವುದು ಈ ನೀತಿಯ ಪ್ರಮುಖ ಉದ್ದೇಶವಾಗಿದೆ. ಇದೊಂದು ಮಹತ್ವದ ಕಾರ್ಯತಂತ್ರದ ನೀಲನಕ್ಷೆಯಾಗಿದೆ.
- ಜಾಗತಿಕ ನಾಯಕತ್ವ: ಕೃತಕ ಬುದ್ಧಿಮತ್ತೆ (AI), ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸೈಬರ್ ಭದ್ರತೆ ಯಂತಹ ಆಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿ ರೂಪಿಸುವುದು ಇದರ ಗುರಿಯಾಗಿದೆ.
- ಸಮತೋಲಿತ ಬೆಳವಣಿಗೆ: ನವೆಂಬರ್ 2025 ರಲ್ಲಿ ರಾಜ್ಯ ಸಚಿವ ಸಂಪುಟದಿಂದ ಅನುಮೋದನೆಗೊಂಡ ಈ ನೀತಿಯು, ‘ಬೆಂಗಳೂರಿನ ಆಚೆಗೆ’ ಈ ಉಪಕ್ರಮದ ಮೂಲಕ ರಾಜ್ಯದಾದ್ಯಂತ ಸಮಾನ ಬೆಳವಣಿಗೆಗೆ ಒತ್ತು ನೀಡುತ್ತದೆ. ಐದು ವರ್ಷಗಳ ಅವಧಿಗೆ ಒಟ್ಟು ₹967.12 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದೆ.
ನೀತಿಯ ಪ್ರಮುಖ ದೃಷ್ಟಿಕೋನ ಮತ್ತು ಗುರಿಗಳು:
- ಈ ನೀತಿಯನ್ನು “FRAME” (ಮುಂಬರುವ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಪ್ರಾದೇಶಿಕ ಅಭಿವೃದ್ಧಿ, ಹೊಂದಾಣಿಕೆ, ಮಾರುಕಟ್ಟೆ ಸೃಷ್ಟಿ, ಉದ್ಯಮ ಸೌಲಭ್ಯ) ಚೌಕಟ್ಟಿನ ಆಧಾರದ ಮೇಲೆ ವಿನ್ಯಾಸಗೊಳಿಸಲಾಗಿದೆ.
|
ಉದ್ದೇಶ |
ಪ್ರಸ್ತುತ ಸ್ಥಿತಿ (ಅಂದಾಜು) |
2030 ರ ವೇಳೆಗೆ ಗುರಿ |
|
ಸಾಫ್ಟ್ ವೇರ್ ರಫ್ತು |
₹4.09 ಲಕ್ಷ ಕೋಟಿ |
₹11.5 ಲಕ್ಷ ಕೋಟಿ |
|
ಉದ್ಯೋಗ ಸೃಷ್ಟಿ |
12 ಲಕ್ಷ ನೇರ ಐಟಿ ಉದ್ಯೋಗಗಳು 31 ಲಕ್ಷ ಪರೋಕ್ಷ ಉದ್ಯೋಗಗಳು |
90 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳು |
|
ಜಿಎಸ್ಡಿಪಿಗೆ (GSDP) ಐಟಿ ವಲಯದ ಕೊಡುಗೆ |
26% |
36% |



ನಿಮ್ಮದೊಂದು ಉತ್ತರ