ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ, 2025-2030 | ಮೇಕೆದಾಟು ಜಲಾಶಯ ಯೋಜನೆ

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ, 2025-2030

ಇದೀಗ ಸುದ್ದಿಯಲ್ಲಿದೆ:

  • ರಾಜ್ಯ ಸರ್ಕಾರವು ‘ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030’ ಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದೆ.

ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ, 2025-2030 ರ ಕುರಿತು:

  • ಅನಾವರಣ: ನವೆಂಬರ್ 2025 ರಲ್ಲಿ ನಡೆದ ಪ್ರತಿಷ್ಠಿತ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ಯಲ್ಲಿ ಈ ನೀತಿಯನ್ನು ಅನಾವರಣಗೊಳಿಸಲಾಯಿತು.
  • ದೃಷ್ಟಿಕೋನ: ಬಾಹ್ಯಾಕಾಶ ನಾವೀನ್ಯತೆ ಮತ್ತು ಉತ್ಪಾದನಾ ವಲಯದಲ್ಲಿ ರಾಜ್ಯವನ್ನು ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ಗುರಿಯನ್ನು ಹೊಂದಿರುವ ಮಹತ್ವದ ಕಾರ್ಯತಂತ್ರದ ನೀಲನಕ್ಷೆಯಾಗಿದೆ.

ಪ್ರಮುಖ ಉದ್ದೇಶಗಳು

ಈ ನೀತಿಯು ರಾಜ್ಯದ ಬಾಹ್ಯಾಕಾಶ ಉದ್ಯಮದ ಬೆಳವಣಿಗೆಗಾಗಿ ಈ ಕೆಳಗಿನ ಮಹತ್ವಾಕಾಂಕ್ಷೆಯ ಗುರಿ ಮತ್ತು ಉದ್ದೇಶಗಳನ್ನು ಹೊಂದಿದೆ:

  1. ಮಾರುಕಟ್ಟೆ ಪಾಲು:- ರಾಷ್ಟ್ರೀಯ ಬಾಹ್ಯಾಕಾಶ ಮಾರುಕಟ್ಟೆಯ ಶೇ. 50 ರಷ್ಟು ಪಾಲನ್ನು (2033 ರ ವೇಳೆಗೆ 22 ಶತಕೋಟಿ ಅಮೆರಿಕನ್ ಡಾಲರ್ ಎಂದು ಅಂದಾಜಿಸಲಾಗಿದೆ) ಮತ್ತು ಜಾಗತಿಕ ಮಾರುಕಟ್ಟೆಯ ಶೇ. 5 ರಷ್ಟು ಪಾಲನ್ನು ವಶಪಡಿಸಿಕೊಳ್ಳುವುದು.
  2. ಹೂಡಿಕೆ ಆಕರ್ಷಣೆ:- ರಾಜ್ಯದ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಒಟ್ಟಾರೆಯಾಗಿ 3 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ಆಕರ್ಷಿಸುವುದು.
  3. ಮಾನವ ಸಂಪನ್ಮೂಲ ಅಭಿವೃದ್ಧಿ:- ವಿಶೇಷ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಲ್ಲಿ 15,000 ಮಹಿಳೆಯರು ಸೇರಿದಂತೆ ಒಟ್ಟು 50,000 ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಉನ್ನತ ತರಬೇತಿ ಮತ್ತು ಕೌಶಲ್ಯವನ್ನು  ಒದಗಿಸುವುದು.
  4. ನವೋದ್ಯಮಗಳಿಗೆ ಪ್ರೋತ್ಸಾಹ:- 500 ಬಾಹ್ಯಾಕಾಶ ನವೋದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ  ಪ್ರೋತ್ಸಾಹ ನೀಡುವುದು. ಕರ್ನಾಟಕದಿಂದಲೇ 50 ಉಪಗ್ರಹಗಳ ವಿನ್ಯಾಸ, ತಯಾರಿಕೆ ಮತ್ತು ಉಡಾವಣೆಗೆ ಅಗತ್ಯವಾದ ನೆರವು ನೀಡುವುದು.

ನೀತಿಯ ಮಹತ್ವ 

  • ಈ ನೀತಿಯು ಕೇಂದ್ರ ಸರ್ಕಾರದ ‘ಭಾರತೀಯ ಬಾಹ್ಯಾಕಾಶ ನೀತಿ 2023’ ರೊಂದಿಗೆ ಮತ್ತು 2035 ರ ವೇಳೆಗೆ ‘ಭಾರತೀಯ ಅಂತರಿಕ್ಷ ನಿಲ್ದಾಣ‘ವನ್ನು ಸ್ಥಾಪಿಸುವ ಹಾಗೂ 2040 ರ ವೇಳೆಗೆ ಭಾರತೀಯ ಗಗನಯಾತ್ರಿಯನ್ನು ಚಂದ್ರನ ಮೇಲೆ ಇಳಿಸುವ ರಾಷ್ಟ್ರೀಯ ಗುರಿಗಳಿಗೆ ಪೂರಕವಾಗಲಿದೆ.

ಮೇಕೆದಾಟು ಜಲಾಶಯ ಯೋಜನೆ

ಇದೀಗ ಸುದ್ದಿಯಲ್ಲಿದೆ:

  • ಕರ್ನಾಟಕ ಮತ್ತು ತಮಿಳುನಾಡು ನಡುವಿನ ಅಂತರರಾಜ್ಯ ನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಕರ್ನಾಟಕವು ಜಲಾಶಯವನ್ನು ನಿರ್ಮಿಸಲು ಉದ್ದೇಶಿಸಿದ ಯೋಜನೆಯನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು, ಸರ್ವೋಚ್ಚ ನ್ಯಾಯಾಲಯವು “ಅಕಾಲಿಕ” ಎಂದು ಪರಿಗಣಿಸಿ, ವಿಚಾರಣೆಗೆ ಅಂಗೀಕರಿಸಲು ನಿರಾಕರಿಸಿದೆ.

ಕಾವೇರಿ ನದಿ ವ್ಯವಸ್ಥೆಯ ಬಗ್ಗೆ:

  • ಉಗಮ: ತಲಕಾವೇರಿ (ಕೊಡಗು ಜಿಲ್ಲೆಯ ಬ್ರಹ್ಮಗಿರಿ ಬೆಟ್ಟಗಳಲ್ಲಿ).
  • ಒಟ್ಟು ಉದ್ದ: 805 ಕಿ.ಮೀ.
  • ಹರಿವಿನ ದಿಕ್ಕು: ಪೂರ್ವಾಭಿಮುಖ.
  • ಹರಿಯುವ ರಾಜ್ಯಗಳು: ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ.
  • ಉಪನದಿಗಳು: ಅರ್ಕಾವತಿ, ಶಿಂಷಾ, ಹೇಮಾವತಿ, ಕಪಿಲಾ, ಹೊನ್ನುಹೊಳೆ, ಅಮರಾವತಿ, ಲಕ್ಷ್ಮಣತೀರ್ಥ, ಕಬಿನಿ, ಲೋಕಪಾವನಿ, ಭವಾನಿ ಮತ್ತು ನೊಯ್ಯಲ್.

ಮೇಕೆದಾಟು ಯೋಜನೆಯ ಬಗ್ಗೆ:

  • ಯೋಜನೆಯ ಸ್ವರೂಪ: ಮೇಕೆದಾಟು ಯೋಜನೆಯು ಒಂದು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಪೂರೈಕೆ ಯೋಜನೆಯಾಗಿದೆ.
  • ನಿರ್ಮಾಣ ಸ್ಥಳ: ಇದನ್ನು ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮದಲ್ಲಿ ನಿರ್ಮಿಸಲು ಕರ್ನಾಟಕ ಸರ್ಕಾರವು ಉದ್ದೇಶಿಸಿದೆ.
  • ಉದ್ದೇಶ: ಬೆಂಗಳೂರು ಮಹಾನಗರ ಮತ್ತು ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
  • ಮಹತ್ವ : ಕುಡಿಯುವ ನೀರು ಪೂರೈಕೆಯ ಜೊತೆಗೆ, ಈ ಯೋಜನೆಯು 400 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ.
  • ಯೋಜನೆಯ ಬಗೆಗಿನ ಕಳವಳಗಳು: ಈ ಯೋಜನೆಯ ಅನುಷ್ಠಾನದಿಂದಾಗಿ “ಕಾವೇರಿ ವನ್ಯಜೀವಿ ಧಾಮ”ದ ಸುಮಾರು 63% ರಷ್ಟು ಅರಣ್ಯ ಪ್ರದೇಶವು ಮುಳುಗಡೆಯಾಗುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿದೆ.

Comments

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

More posts