“ಸನ್ಮಿತ್ರ” ಉಪಕ್ರಮ

“ಸನ್ಮಿತ್ರ” ಉಪಕ್ರಮ

ಇದೀಗ ಸುದ್ದಿಯಲ್ಲಿದೆ: 

  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ, ‘ಸನ್ಮಿತ್ರ’ (ಒಬ್ಬ ಒಳ್ಳೆಯ ಸ್ನೇಹಿತ) ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ.

‘ಸನ್ಮಿತ್ರ’ ಉಪಕ್ರಮದದ ಬಗ್ಗೆ 

  • ಉದ್ದೇಶ: ಮಾದಕ ದ್ರವ್ಯ ವ್ಯಸನದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ನಿರಂತರ ಬೆಂಬಲ, ಪುನರ್ವಸತಿ ಮತ್ತು ಮೇಲ್ವಿಚಾರಣೆಯನ್ನು ಒದಗಿಸುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ.
  • ವಿಶಿಷ್ಟ ವಿಧಾನ: ಈ ಕಾರ್ಯಕ್ರಮವು ಮಾದಕ ವ್ಯಸನದ ಸಮಸ್ಯೆಯನ್ನು ಕೇವಲ ಕಾನೂನು ಜಾರಿ ದೃಷ್ಟಿಕೋನದಿಂದ ನೋಡದೆ, ಸಹಾನುಭೂತಿ, ಸೂಕ್ತ ಮಾರ್ಗದರ್ಶನ ಮತ್ತು ರಚನಾತ್ಮಕ ಪುನರ್ವಸತಿಯ ಮೂಲಕ ಪರಿಹರಿಸಲು ಯತ್ನಿಸುತ್ತದೆ.
  • ಸನ್ಮಿತ್ರ ಸಹಾಯವಾಣಿ: ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮೀಸಲಾದ ‘ಸನ್ಮಿತ್ರ ಸಹಾಯವಾಣಿ’ ಅನ್ನು ಸ್ಥಾಪಿಸಲಾಗುವುದು.
  • ಸಿಬ್ಬಂದಿಯ ಜವಾಬ್ದಾರಿ: ಸನ್ಮಿತ್ರ ಯೋಜನೆಯಡಿ ನಿಯೋಜಿತರಾದ ಪೊಲೀಸ್ ಸಿಬ್ಬಂದಿ , ಬಾಧಿತ ವ್ಯಕ್ತಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಅವರ ಕುಟುಂಬದ ಸದಸ್ಯರೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಮತ್ತು ಮಾನಸಿಕ ಆರೋಗ್ಯ ತಜ್ಞರೊಂದಿಗೆ ಸಮನ್ವಯ ಸಾಧಿಸುವ ಮೂಲಕ ವ್ಯಕ್ತಿಯ ಚೇತರಿಕೆಯ ಮಾಸಿಕ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಬೇಕು.
  • ವರದಿ ನಿರ್ವಹಣೆ: ಪೊಲೀಸ್ ಠಾಣಾಧಿಕಾರಿಗಳು ಪ್ರತಿ ಎರಡು ವಾರಗಳಿಗೊಮ್ಮೆ ಸನ್ಮಿತ್ರ ಸಿಬ್ಬಂದಿಯಿಂದ ಪ್ರಗತಿಯ ವರದಿಗಳನ್ನು ಸಂಗ್ರಹಿಸಬೇಕು. ತದನಂತರ, ಗೌಪ್ಯ ಮಾಸಿಕ ವರದಿಗಳನ್ನು ಮೊಹರು ಮಾಡಿದ ಲಕೋಟೆಗಳಲ್ಲಿ  ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿ (SP) ಅಥವಾ ಉಪ ಪೊಲೀಸ್ ಆಯುಕ್ತರಿಗೆ (DCP) ಸಲ್ಲಿಸಬೇಕು.

Comments

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

More posts