ವಿಜ್ ಎಐ ಪಥ(VijAIpatha) ಪ್ರಯೋಗಾಲಯ
ಇದೀಗ ಸುದ್ದಿಯಲ್ಲಿದೆ:
- ಇತ್ತೀಚಿಗೆ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೊಸಪೇಟೆಯಲ್ಲಿ ‘ವಿಜ್ ಎಐ ಪಥ’ (VijAIpatha) ಎಂಬ ಪ್ರಾಯೋಗಿಕ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ಉಪಕ್ರಮಕ್ಕೆ ಚಾಲನೆ ನೀಡಿದರು.
‘ವಿಜ್ ಎಐ ಪಥ’ ಪ್ರಯೋಗಾಲಯಗಳ ಬಗ್ಗೆ:
- ಗುರಿ:– ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI), ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM), ರೋಬೋಟಿಕ್ಸ್, ಕೋಡಿಂಗ್ ಮತ್ತು ಡಿಜಿಟಲ್ ನಾವೀನ್ಯತೆಗಳಲ್ಲಿ ಭವಿಷ್ಯಕ್ಕೆ ಪೂರಕವಾಗುವ ಕೌಶಲಗಳನ್ನು ಒದಗಿಸುವುದು.
- ಅನುಷ್ಠಾನ:– ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ‘ಸೈಯಂಟ್ ಫೌಂಡೇಶನ್’ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಅಮರಾವತಿಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಈ ಉಪಕ್ರಮವನ್ನು ಉದ್ಘಾಟಿಸಲಾಯಿತು.
- ಪ್ರಯೋಜನೆಗಳು:– ‘ವಿಜ್ ಎಐ ಪಥ’ ದಂತಹ ಕಾರ್ಯಕ್ರಮಗಳು ಡಿಜಿಟಲ್ ಕಂದಕವನ್ನು ಹೋಗಲಾಡಿಸಲು ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ಉದಯೋನ್ಮುಖ ತಂತ್ರಜ್ಞಾನಗಳಿಗೆ ಸಿದ್ಧಪಡಿಸಲು ಸಹಾಯ ಮಾಡುತ್ತವೆ.



ನಿಮ್ಮದೊಂದು ಉತ್ತರ