ರಾಷ್ಟ್ರೀಯ ಯುವ ದಿನಾಚರಣೆ 2026

ರಾಷ್ಟ್ರೀಯ ಯುವ ದಿನಾಚರಣೆ 2026

ಇತರೆ ವಿಷಯಗಳು

ಇದೀಗ ಸುದ್ದಿಯಲ್ಲಿದೆ: 

  • ಇತ್ತೀಚಿಗೆ, ಸ್ವಾಮಿ ವಿವೇಕಾನಂದ ಅವರ  ಜನ್ಮದಿನದ ಅಂಗವಾಗಿ, ಜನವರಿ 12 ರಂದು ‘ರಾಷ್ಟ್ರೀಯ ಯುವ ದಿನಾಚರಣೆ”ಯನ್ನು ಆಚರಿಸಲಾಯಿತು.

ರಾಷ್ಟ್ರೀಯ ಯುವ ದಿನಾಚರಣೆಯ ಬಗ್ಗೆ:

  • ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನ:- ಶ್ರೇಷ್ಠ ಆಧ್ಯಾತ್ಮಿಕ ನಾಯಕ, ತತ್ವಜ್ಞಾನಿ ಮತ್ತು ಚಿಂತಕ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಜನವರಿ 12 ರಂದು ಇದನ್ನು ಆಚರಿಸಲಾಗುತ್ತದೆ.
  • ಯುವಜನರ ಸಾಮರ್ಥ್ಯದ ಮೇಲಿನ ಅವರ ಅಚಲವಾದ ನಂಬಿಕೆಯು, ದೇಶದ ಯುವ ನಾಗರಿಕರ ಮನದಲ್ಲಿ ಇಂದಿಗೂ ಆಳವಾಗಿ ಪ್ರತಿಧ್ವನಿಸುತ್ತಿದೆ.
  • ಶಿಕ್ಷಣ, ನವೋದ್ಯಮಗಳು, ಸೇವೆ ಮತ್ತು ನಾಯಕತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ಯುವಜನರ ಪ್ರಮುಖ ಪಾತ್ರವನ್ನು ‘ರಾಷ್ಟ್ರೀಯ ಯುವ ದಿನ 2026’ ಎತ್ತಿ ತೋರಿಸುತ್ತದೆ.
  • ಸ್ವಾಮಿ ವಿವೇಕಾನಂದರಿಂದ ಸ್ಫೂರ್ತಿ ಪಡೆದ ಈ ದಿನವು, ಯುವಕರು ಕೇವಲ ಉತ್ತರಾಧಿಕಾರಿಗಳಲ್ಲ, ಬದಲಿಗೆ “2047 ರ ವಿಕಸಿತ ಭಾರತ ಕನಸಿನತ್ತ ಸಾಗುವ ಭಾರತದ ಪಯಣದ ಶಿಲ್ಪಿಗಳು” ಎಂಬುದನ್ನು ಒತ್ತಿಹೇಳುತ್ತದೆ.

ಯುವಕರಿಗಾಗಿ ಸರ್ಕಾರದ ಉಪಕ್ರಮಗಳು:

  • ಮೇರಾ ಯುವ ಭಾರತ್ (MY Bharat): ಇದು ಸ್ವಾಯತ್ತ, ತಂತ್ರಜ್ಞಾನ ಚಾಲಿತ ವೇದಿಕೆಯಾಗಿದೆ.
  • ಸಚಿವಾಲಯ:- ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ.  
  • ಉದ್ದೇಶ:- ಇದು ಸ್ವಯಂಸೇವಕತನ, ಕೌಶಲ್ಯ ಅಭಿವೃದ್ಧಿ, ನಾಯಕತ್ವ ಮತ್ತು ಪ್ರಾಯೋಗಿಕ ಕಲಿಕೆಯ ಅವಕಾಶಗಳೊಂದಿಗೆ ಸಂಪರ್ಕ ಕಲ್ಪಿಸುವ ಮೂಲಕ ಯುವಜನರನ್ನು ಸಬಲೀಕರಣಗೊಳಿಸುತ್ತದೆ.
  • ರಾಷ್ಟ್ರೀಯ ಸೇವಾ ಯೋಜನೆ (NSS):- ಇದು 
  • ಸಚಿವಾಲಯ:- ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ.
  • ಉದ್ದೇಶ:- ಸಮುದಾಯ ಸೇವೆಯ ಮೂಲಕ ಯುವಜನರ ವ್ಯಕ್ತಿತ್ವ ವಿಕಸನ ಮಾಡುವುದು ಮತ್ತು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವುದು ಇದರ ಒಟ್ಟಾರೆ ಉದ್ದೇಶವಾಗಿದೆ.
  • ಅಗ್ನಿಪಥ ಯೋಜನೆ:- 
  • ಪ್ರಾರಂಭ:- ಕೇಂದ್ರ ಸರ್ಕಾರವು 2022 ರಲ್ಲಿ
  • ಉದ್ದೇಶ:- ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರನ್ನೂ ಭಾರತದ ಮೂರೂ ಸೇನೆಗಳ ‘ಅಧಿಕಾರಿ ಹುದ್ದೆಗಿಂತ ಕೆಳಗಿನ ಶ್ರೇಣಿಗೆ’ 4 ವರ್ಷಗಳ ಅವಧಿಗೆ ‘ಅಗ್ನಿವೀರರನ್ನಾಗಿ’ ನೇಮಿಸಿಕೊಳ್ಳಲಾಗುತ್ತದೆ.
  • PM-SETU ಯೋಜನೆ:- 
  • PM-SETU ವಿಸ್ತರಿತ ರೂಪ:- ಉನ್ನತೀಕರಿಸಿದ ಐಟಿಐಗಳ ಮೂಲಕ – ಪ್ರಧಾನ ಮಂತ್ರಿ ಕೌಶಲ್ಯ ಮತ್ತು ಉದ್ಯೋಗಾರ್ಹತೆಯ ಪರಿವರ್ತನೆ ಯೋಜನೆ.
  • ಪ್ರಾರಂಭ:- 2025 ರ ಅಕ್ಟೋಬರ್‌ 
  • ಉದ್ದೇಶ:- ಇದು ಭಾರತದ ‘ಕೈಗಾರಿಕಾ ತರಬೇತಿ ಸಂಸ್ಥೆಗಳ’ (ITIs) ಜಾಲವನ್ನು ಆಧುನೀಕರಿಸಲು ಮತ್ತು ಜಾಗತಿಕ ಕೈಗರಿಕೋದ್ಯಮದ ಮಾನದಂಡಗಳೊಂದಿಗೆ ವೃತ್ತಿಪರ ತರಬೇತಿಯನ್ನು ಸಂಯೋಜಿಸಲು ರೂಪಿಸಲಾಗಿದೆ 
  • ಹಣಕಾಸಿನ ಹಂಚಿಕೆ:- ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ.
  • ಕೌಶಲ್ಯ ಭಾರತ ಮಿಷನ್ (SIM):- 
  • ಪ್ರಾರಂಭ:- 2015 ರಲ್ಲಿ, ವಿಶ್ವ ಯುವ ಕೌಶಲ್ಯ ದಿನದಂದು.
  • ಉದ್ದೇಶ:- ಇದು ವ್ಯಾಪಕವಾದ ಕೇಂದ್ರ ಮತ್ತು ಸಂಸ್ಥೆಗಳ ಜಾಲದ ಮೂಲಕ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ, ಮರು-ಕೌಶಲ್ಯ ಮತ್ತು ಉನ್ನತ-ಕೌಶಲ್ಯ ತರಬೇತಿಯನ್ನು ನೀಡುತ್ತದೆ.
  • ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY):- 
  • ಪ್ರಾರಂಭ:- 2015 
  • ಉದ್ದೇಶ:- ಅಲ್ಪಾವಧಿಯ ಕೌಶಲ್ಯ ತರಬೇತಿ ಮತ್ತು ಉನ್ನತ-ಕೌಶಲ್ಯ ಅಥವಾ ಮರು-ಕೌಶಲ್ಯ ತರಬೇತಿಯನ್ನು ಒದಗಿಸಲು. 
  • ಇದು ‘ಪೂರ್ವ ಕಲಿಕೆಯ ಗುರುತಿಸುವಿಕೆ’ಯ  ಮೂಲಕ ಭಾರತದಾದ್ಯಂತ ಯುವಜನರಿಗೆ ತರಬೇತಿ ನೀಡುವುದನ್ನು ಒಳಗೊಂಡಿದೆ.
  • ಜನ ಶಿಕ್ಷಣ ಸಂಸ್ಥಾನ (JSS) ಯೋಜನೆ:- 
  • ಪ್ರಾರಂಭ:- ಆರಂಭದಲ್ಲಿ 1967 ರಲ್ಲಿ ‘ಶ್ರಮಿಕ್ ವಿದ್ಯಾಪೀಠ’ ಎಂದು ಪ್ರಾರಂಭಿಸಲಾಯಿತು. 
  • ಉದ್ದೇಶ:- ಇದು ಅನೌಪಚಾರಿಕ ವಿಧಾನದಲ್ಲಿ ಕೌಶಲ್ಯ ತರಬೇತಿಯನ್ನು ನೀಡುವ ಉದ್ದೇಶವನ್ನು ಹೊಂದಿದೆ.
  • ರಾಷ್ಟ್ರೀಯ ಶಿಷ್ಯವೃತ್ತಿ ಉತ್ತೇಜನ ಯೋಜನೆ (NAPS):-
  • ಪ್ರಾರಂಭ:- ಆಗಸ್ಟ್ 2016
  • ಉದ್ದೇಶ:- ಶಿಷ್ಯವೃತ್ತಿ ವಿದ್ಯಾರ್ಥಿಗಳ ವೇತನಕ್ಕೆ ಹಣಕಾಸಿನ ಬೆಂಬಲವನ್ನು ಒದಗಿಸುವ ಮೂಲಕ ಶಿಷ್ಯವೃತ್ತಿಯನ್ನು ಉತ್ತೇಜಿಸುತ್ತದೆ. 
  • ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY):- 
  • ಪ್ರಾರಂಭ:- 2014
  • ಇದು ‘ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಕಾರ್ಯಯೋಜನೆ ‘(NRLM)ಯ ಭಾಗವಾಗಿದೆ. 
  • 2 ಪ್ರಮುಖ ಉದ್ದೇಶಗಳು:- 
  • ಗ್ರಾಮೀಣ ಬಡ ಕುಟುಂಬಗಳ ಆದಾಯ ಮೂಲಗಳಲ್ಲಿ ವೈವಿಧ್ಯತೆಯನ್ನು ತರುವುದು.
  • ಗ್ರಾಮೀಣ ಯುವಕರ ವೃತ್ತಿ ಆಕಾಂಕ್ಷೆಗಳನ್ನು ಪೂರೈಸುವುದು.
  • ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್‌ಗಾರ್ ಯೋಜನೆ:- 
  • ಘೋಷಣೆ:- 2025 ರಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಘೋಷಣೆ.
  • ವೆಚ್ಚ:- ₹1 ಲಕ್ಷ ಕೋಟಿ 
  • ಆರ್ಥಿಕ ಪ್ರೋತ್ಸಾಹ:- ಇದು ಹೊಸದಾಗಿ ಉದ್ಯೋಗಕ್ಕೆ ಸೇರುವ ಯುವಜನರಿಗೆ 2 ಕಂತುಗಳಲ್ಲಿ ₹15,000 ವರೆಗಿನ ಆರ್ಥಿಕ ಪ್ರೋತ್ಸಾಹವನ್ನು ನೀಡುತ್ತದೆ.
  • ಉದ್ಯೋಗದಾತರಿಗೆ ಸಹಾಯಧನ:- ಹೆಚ್ಚುವರಿಯಾಗಿ, ಉದ್ಯೋಗದಾತರು ಪ್ರತಿ ಹೊಸ ಉದ್ಯೋಗಿಗೆ ತಿಂಗಳಿಗೆ ₹3,000 ವರೆಗೆ ಸಹಾಯಧನವನ್ನು ನೀಡುತ್ತಾರೆ. ಇದು ಹೊಸ ಉದ್ಯೋಗಾವಕಾಶಗಳ ಸೃಷ್ಟಿಯನ್ನು ಉತ್ತೇಜಿಸುತ್ತದೆ.
  • ಸ್ಟಾರ್ಟ್ಅಪ್ ಇಂಡಿಯಾ:- 
  • ಪ್ರಾರಂಭ:- 2016
  • ಉದ್ದೇಶ:- ನಾವೀನ್ಯತೆ ಮತ್ತು ಉದ್ಯಮಶೀಲತೆಗಾಗಿ ದೃಢವಾದ ಪರಿಸರ ವ್ಯವಸ್ಥೆಯನ್ನು ರೂಪಿಸುವ ಉದ್ದೇಶವನ್ನು ಹೊಂದಿದೆ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY):- 
  • ಉದ್ದೇಶ:- ಹಣಕಾಸು ಸೌಲಭ್ಯ ಪಡೆಯದ ಸೂಕ್ಷ್ಮ ಉದ್ಯಮ ಮತ್ತು ಸಣ್ಣ ವ್ಯಾಪಾರಗಳಿಗೆ ಹಣಕಾಸು ಸೌಲಭ್ಯ ಒದಗಿಸುವುದು
  • ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ (RKSK):- 
  • ಪ್ರಾರಂಭ:- 2014
  • ಸಚಿವಾಲಯ:- ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ.
  • ಉದ್ದೇಶ:- ಭಾರತದಾದ್ಯಂತ 10–19 ವರ್ಷದ ಕಿಶೋರರ ಸಮಗ್ರ ಆರೋಗ್ಯ ಅಗತ್ಯಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದೆ.

ಸ್ವಾಮಿ ವಿವೇಕಾನಂದರ ಬಗ್ಗೆ:

  • ಜನನ:- ಜನವರಿ 12, 1863 ರಂದು ಕೋಲ್ಕತ್ತಾದಲ್ಲಿ ನರೇಂದ್ರ ನಾಥ ದತ್ತ ಎಂಬ ಹೆಸರಿನಲ್ಲಿ ಜನಿಸಿದರು.
  • ಪಾಶ್ಚಿಮಾತ್ಯರಿಗೆ ಯೋಗ ಮತ್ತು ವೇದಾಂತದ ಹಿಂದೂ ತತ್ವಚಿಂತನೆಗಳನ್ನು ಪರಿಚಯಿಸುವಲ್ಲಿ ಇವರು ಪ್ರಮುಖ ವ್ಯಕ್ತಿಯಾಗಿದ್ದರು.
  • ಇವರು ರಾಮಕೃಷ್ಣ ಪರಮಹಂಸರ ಶಿಷ್ಯರಾಗಿದ್ದರು. ಭಾರತದಲ್ಲಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸುಧಾರಣೆಗೆ ತಮ್ಮನ್ನು ಮುಡಿಪಾಗಿಟ್ಟರು ಹಾಗೂ ಆರ್ಥಿಕ ಸುಧಾರಣೆ ಮತ್ತು ಆಧ್ಯಾತ್ಮಿಕ ಜ್ಞಾನದ ಬಗ್ಗೆ ಜನರಿಗೆ ಶಿಕ್ಷಣ ನೀಡಲು ದೇಶಾದ್ಯಂತ ಸಂಚರಿಸಿದರು.
  • 1893 ರಲ್ಲಿ ಚಿಕಾಗೋದಲ್ಲಿ ನಡೆದ ‘ವಿಶ್ವ ಧರ್ಮಗಳ ಸಂಸತ್ತಿನಲ್ಲಿ’ ಮಾಡಿದ ಭಾಷಣದ ಮೂಲಕ ಇವರು ಜಾಗತಿಕ ಮನ್ನಣೆಯನ್ನು ಗಳಿಸಿದರು. ಅದರಲ್ಲಿ ಅವರು ಸಾರ್ವತ್ರಿಕ ಸಹಿಷ್ಣುತೆ, ಎಲ್ಲಾ ಧರ್ಮಗಳ ಸ್ವೀಕಾರ ಮತ್ತು ಭಾರತೀಯ ಸಂಪ್ರದಾಯಗಳ ಬಗ್ಗೆ ಹೆಮ್ಮೆಯನ್ನು ಪ್ರತಿಪಾದಿಸಿದರು.
  • 1897 ರಲ್ಲಿ ರಾಮಕೃಷ್ಣ ಮಿಷನ್ ಮತ್ತು 1899 ರಲ್ಲಿ ಬೇಲೂರು ಮಠ ಸ್ಥಾಪನೆ:- ಇದು ಲೌಕಿಕ ಪ್ರಗತಿಯೊಂದಿಗೆ ಆಧ್ಯಾತ್ಮಿಕತೆಯ ಏಕೀಕರಣವನ್ನು ಉತ್ತೇಜಿಸಿತು.
  • ತಮ್ಮ ಬೋಧನೆ, ಉಪನ್ಯಾಸ ಮತ್ತು ಬರಹಗಳ ಮೂಲಕ ರಾಜ ಯೋಗ, ಜ್ಞಾನ ಯೋಗ ಮತ್ತು ಕರ್ಮ ಯೋಗ ಸೇರಿದಂತೆ ಅವರು ಯೋಗದ ಅಭ್ಯಾಸ ಮತ್ತು ‘ನವ-ವೇದಾಂತ’ದ ತತ್ವಗಳನ್ನು ಹರಡಿದರು. ಭಾರತೀಯ ಜ್ಞಾನಸಮಾಜದ ಹರಿಕಾರರಾಗಿ ಮತ್ತು ಸಾಮಾಜಿಕ ಹಾಗೂ ಆಧ್ಯಾತ್ಮಿಕ ಉನ್ನತಿಯ ದಾರ್ಶನಿಕರಾಗಿ ಶಾಶ್ವತವಾದ ಪರಂಪರೆಯನ್ನು ಉಳಿಸಿದರು.
  • ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ವಿವೇಕಾನಂದರನ್ನು “ಆಧುನಿಕ ಭಾರತದ ನಿರ್ಮಾತೃ” ಎಂದು ಕರೆದಿದ್ದಾರೆ.

Comments

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

More posts